ಪ್ರೇಮಾ ಕಾರಂತರಿಗೆ ಶೃದ್ಧಾಂಜಲಿ!
ರಂಗಭೂಮಿಯ ಹಿರಿಯ ತಾರೆ ಪ್ರೇಮಾ ಕಾರಂತ ತೆರೆಮರೆಗೆ ಸರಿದರು. ಅವರಿಗಿದೋ ಭಾವಪೂರ್ಣ ಶೃದ್ಧಾಂಜಲಿ! ಪತಿ ದಿವಂಗತ ಬಿ.ವಿ. ಕಾರಂತರ ಜತೆ ರಂಗಭೂಮಿಗೆ ೪೦ವರ್ಷಗಳಿಗಿಂತಲೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಮಗೆ ಅನೇಕ ನಾಟಕಗಳ ಸವಿಯುಣ್ಣಿಸಿದರು. " ಬೆನಕ ಮಕ್ಕಳ ಕೇಂದ್ರ" ಸ್ಥಾಪಿಸಿ ಮಕ್ಕಳ ರಂಗಭೂಮಿಗೆ ಅಪಾರ ಸೇವೆ ಸಲ್ಲಿಸಿದ್ದ ಇವರು ಫಣಿಯಮ್ಮ, ಹಂಸಗೀತೆ, ಗೋಧೂಳಿ, ಕುದುರೆ ಮೊಟ್ಟೆ ಮೊದಲದ ಚಲನ ಚಿತ್ರಗಳಿಗೆ ವಸ್ತ್ರವಿನ್ಯಾಸ ಮಾಡಿ ಪ್ರಸಿದ್ಧರಾಗಿದ್ದಾರೆ.
ಸ್ವಲ್ಪ ಸಮಯದ ಹಿಂದೆ ನಾವು ತೇಜಸ್ವಿಯವರನ್ನು ಕಳೆದುಕೊಂಡೆವು. ಈಗ ಮತ್ತೊಂದು ಭರಿಸಲಾಗದ ನಷ್ಟ. ಇಂತವರು ಕನ್ನಡ ನಾಡಿನಲ್ಲೇ ಮತ್ತೊಮ್ಮೆ ಹುಟ್ಟಿ ಬರಲಿ ಎಂದು ಹಾರೈಸೋಣ!
******************************************************
Subscribe to:
Post Comments (Atom)
0 ಅಭಿಪ್ರಾಯ:
Post a Comment