ನಮಗೆ ನಮ್ಮ ಆಲೋಚನೆಗಳನ್ನು ಮತ್ತು ಜೀವನಕ್ರಮವನ್ನು ಉತ್ತಮಗೊಳಿಸಲು ಸಮಯವಿಲ್ಲವೆಂದರೆ ತುಂಬಾ ದೂರದ ಪ್ರಯಾಣದ ಮಧ್ಯೆ ಇಂದನವನ್ನು ತುಂಬಿಸಲು ಸಮಯವಿಲ್ಲವೆಂದೇ ತಾನೆ! ಪ್ರಯಾಣ ಎಲ್ಲಿ ನಿಲ್ಲುತ್ತದೆಂಬುದು ಯಾರಿಗೆ ಗೊತ್ತು?

23 December, 2013

ಜಿ. ಎಸ್. ಶಿವರುದ್ರಪ್ಪನವರ ನೆನಪಲ್ಲಿ..

ನಾವಿಬ್ಬರೂ ಅಂದು
ಹೊಳೆಯ ದಡದಲಿ ನಿಂದು
ಮರಳುಮನೆಗಳ ಕಟ್ಟಿ
ಆಟವಾಡಿದ ದಿವಸ
ನೆನಪಿದೆಯೆ ನನಗೆ?

ಮುಂಗಾರುಮಳೆ ಹೊಯ್ದು
ನಾವಿಬ್ಬರೂ ತೊಯ್ದು
ನಿಂತಾಗ ಮರಳಮನೆ
ಕೊಚ್ಚಿಹೋದ ದಿವಸ
ನೆನಪಿದೆಯೆ ನಿನಗೆ?

ಈ ಮರುಳು ನನಗೆಂದು
ಆ ಮರುಳು ತನಗೆಂದು
ಹೊಡೆದಾಡಿ ಜತೆ ಬಿಟ್ಟು
ಆಟವಾಡಿದ ದಿವಸ
ನೆನಪಿದೆಯೆ ನಿನಗೆ?

ಮರುದಿವಸ ಒಂದಾಗಿ
ಮರುಳು ಮನೆಗಳ ಕಟ್ಟಿ
ಹಾಡಿಕುಣಿದಾ ದಿವಸ
ನೆನಪಿದೆಯೆ ನಿನಗೆ?

ಅಂದು ಹರಿದಾ ಹೊಳೆಯೆ
ಇಂದಿಗೂ ಹರಿಯುತಿದೆ:
ಬಾ ಗೆಳತಿ ಮತ್ತೊಮ್ಮೆ ಆಟವಾಡೋಣ,
ಬಾಲ್ಯದುದ್ಯಾನವನು ಮರಳಿ ಕಟ್ಟೋಣ!
-      ಡಾ|| ಜಿ. ಎಸ್. ಶಿವರುದ್ರಪ್ಪ
-      ಅಶ್ರು ತರ್ಪಣದೊಂದಿಗೆ ನನ್ನ ನೆಚ್ಚಿನ ಕವಿಗೆ ನಮನ!


No comments:

ಈ ಬರಹಗಳೂ ನಿಮಗಿಷ್ಟವಾಗಬಹುದು!

Related Posts Plugin for WordPress, Blogger...