ನನ್ನ ಮನಸ್ಸು

28 August, 2015

ಹಾಳು ಮೋಹ.. ಬುದ್ಧಿ ಮಂಕು!

ಧ್ಯಾಯತೋ ವಿಷಯಾನ್ ಪುಂಸಃ ಸಂಗಸ್ತೇಷೂಪಜಾಯತೇ|
ಸಂಗಾತ್ ಸಂಜಾಯತೇ ಕಾಮಃ ಕಾಮಾತ್ ಕ್ರೋಧೋsಭಿಜಾಯತೇ||

ಕ್ರೋಧಾತ್ ಭವತಿ ಸಮ್ಮೋಹಃ ಸಮ್ಮೋಹಾತ್ ಸ್ಮೃತಿವಿಭ್ರಮಃ|
ಸ್ಮೃತಿಭ್ರಂಶಾತ್ ಬುದ್ಧಿನಾಶೋ ಬುದ್ಧಿನಾಶಾತ್ ವಿನಶ್ಯತಿ||

||ವಿಷಯಗಳನ್ನೇ ನೆನೆಯುತ್ತಿರುವ ಮನುಷ್ಯನಿಗೆ ಅವುಗಳ ನಂಟು ಬೆಳೆಯುತ್ತದೆ. ನಂಟಿನಿಂದ ಆಸೆ ಕುದುರುತ್ತದೆ. ಆಸೆಗೆ ಅಡ್ಡಿಯಾದಾಗ ರೊಚ್ಚು ಮೂಡುತ್ತದೆ.
ರೊಚ್ಚಿನಿಂದ ಮಾಡಬಾರದನ್ನು ಮಾಡುವ ಬಯಕೆ (ತಪ್ಪು ಗ್ರಹಿಕೆ). ಅಂತಹ ಬಯಕೆಗಳಿಂದ ವಿಧಿ-ನಿಷೇಧಗಳ ಮರೆವು. ಮರೆವಿನಿಂದ ತಿಳಿಗೇಡಿತನ, ತಿಳಿಗೇಡಿತನದಿಂದ ಸರ್ವನಾಶ||


-ಶ್ರೀಮದ್ಭಗವದ್ಗೀತಾ ದ್ವಿತಿಯೋಧ್ಯಾಯಃ

No comments:

Post a Comment